ಒಬ್ಬ ಶ್ರೇಷ್ಠ ತಂದೆ ತಾಯಿ (ಪೋಷಕರು) ತನ್ನ ಮಗನನ್ನು / ಮಗಳನ್ನು ಶಾಲೆಗೆ ಸೇರಿಸುವಾಗ ಶಿಕ್ಷಕರಿಗೆ ಮಾಡಿಕೊಂಡ ಕಳಕಳಿಯ ವಿನಂತಿ ಹೀಗಿತ್ತು.
ಆತ್ಮೀಯ ಶಿಕ್ಷಕ ಬಂಧುಗಳೇ,.
1- ದಯವಿಟ್ಟು ನನ್ನ ಮಗನಿಗೆ/ ಮಗಳಿಗೆ ಅಂಕಗಳ ಹುಚ್ಚು ಹಿಡಿಸಬೇಡಿ.
2- "ಒಂದು ಉನ್ನತ ಹುದ್ದೆ ಹಿಡಿಯುವುದಕ್ಕಾಗಿ ನೀನು ಓದಲಿಕ್ಕೆ ಬಂದಿದ್ದೀಯ" ಎಂದು ದಯವಿಟ್ಟು ಹೇಳಿಕೊಡಬೇಡಿ.
3- ಕೆಲಸ ಯಾವುದೇ ಇರಲಿ ಅದನ್ನು ಪ್ರಾಮಾಣಿಕವಾಗಿ ಖುಷಿಯಿಂದ, ಹೆಮ್ಮೆಯಿಂದ ನಿಷ್ಟೆಯಿಂದ ಮಾಡುವುದೇ ಶ್ರೇಷ್ಠ ಎಂಬುದನ್ನು ಹೇಳಿಕೊಡಿ.
4- ಅವನಿಗೆ ಉತ್ತಮ ಪುಸ್ತಕಗಳ ಹುಚ್ಚು ಹಿಡಿಯುವಂತೆ ಮಾಡಿ, ಶಾಲೆಯ ಪುಸ್ತಕಗಳಷ್ಟೇ ನಮ್ಮ ಮಿತಿ ಎಂಬ ಭ್ರಮೆ ಹುಟ್ಟಿಸಬೇಡಿ.
5- ಭಯದಲ್ಲಿ ನಡುಗುವ ಬದಲು ಖುಷಿಯಿಂದ ಶಿಸ್ತಿಗೆ ಒಡ್ಡಿಕೊಳ್ಳುವುದನ್ನು ಹೇಳಿಕೊಡಿ.
6- ಅವನಿಗೆ ಬದುಕು ಕಲಿಸಿ, ಕಷ್ಟಗಳಲ್ಲಿ ಓಡಿ ಹೋಗುವ, ಸುಖ ಬಂದಾಗ ಕುಣಿದಾಡುವುದರ ಬದಲು ಸಮಚಿತ್ತತೆಯಿಂದ ಇರುವುದನ್ನು ಹೇಳಿಕೊಡಿ, ನೋವಿನಲ್ಲೂ ನಗುವುದನ್ನು ಕಲಿಸಿ.
7- ಎಂದಿಗೂ ಜಾತಿಯ ಬೀಜ ಮೊಳೆಯದಂತೆ ನೋಡಿಕೊಳ್ಳಿ.
8- ಸಾಧ್ಯವಾದರೆ ಅವರಿಗೆ ಪ್ರಕೃತಿಯಲ್ಲಿ ಕಳೆದುಹೋಗುವುನ್ನು ಹೇಳಿಕೊಡಿ, ಸುರಿಯುವ ಮಳೆಯಲ್ಲಿ ನೆನೆಯುವ, ಚಿಟ್ಟೆಗಳ ಚಂದವನ್ನು ಆನಂದಿಸುವ, ಹಾರುವ ಪಕ್ಷಿಗಳನ್ನು ಎಣಿಸುವ, ಸಾಲಾಗಿ ನಡೆದುಕೊಂಡು ಹೋಗುವ ಇರುವೆಗಳನ್ನು ಹಿಂಬಾಲಿಸುವ, ಬೀಜ ಮೊಳೆಯುವುದನ್ನು ಕಾಯುವ,ಪ್ರಕೃತಿ ಕಾಪಾಡುವುದನ್ನು ಕುತೂಹಲ ತುಂಬಿ.
9- ಗಿಡ ನೆಡಲು ಪಣತೊಡುವ ಮನಸ್ಸು ಬರುವಂತೆ ಮಾಡಿ. ಬದುಕಿನಲ್ಲಿ ಮೋಸ ಮಾಡಿ ಗೆಲ್ಲುವುದಕ್ಕಿಂತ, ಪ್ರಾಮಾಣಿಕವಾಗಿ ಸೋಲುವುದನ್ನು ಕಲಿಸಿ.
10- ಅನ್ಯಾಯ ಮಾಡಿ ಗಳಿಸುವುದಕ್ಕಿಂತ, ಒಬ್ಬರಿಗೆ ನೋವು ಮಾಡಿ ಪಡೆಯುವುದಕ್ಕಿಂತ ಪ್ರಾಮಾಣಿಕತೆಯಿಂದ ಸಾಧಿಸಲು ತಿಳಿಸಿ.
11- ಜೀವನ ತುಂಬಾ ಸುಂದರವಾಗಿದೆ ಎಂಬುದನ್ನು ಹೇಳಿಕೊಡಿ.
12- ಪ್ರತಿ ಕ್ಷಣದಲ್ಲೂ ಖುಷಿಯಿದೆ ಎಂಬುದನ್ನು ಅವನು ತಿಳಿಯಲಿ.
13- ಹೆಣ್ಣನ್ನು ಗೌರವಿಸುವ, ದೀನ ದುರ್ಬಲರನ್ನು, ವಯೋ ವೃದ್ಧರನ್ನು ನೋಡಿ ಮರುಗುವ ಗುಣ ಕಲಿಸಿ, ಕಷ್ಟದಲ್ಲಿ, ನೋವಿನಲ್ಲಿರುವವರ ಸಹಾಯಕ್ಕೆ ಧಾವಿಸುವ ಛಲ ಬರುವಂತೆ ಮಾಡಿ.
14- ಫೇಲಾದರೂ ಪರವಾಗಿಲ್ಲ ಬದುಕಿನಲ್ಲಿ ಖುಷಿಯಾಗಿ ದುಡಿದು ಜೀವಿಸುವುದನ್ನು ಕಲಿಸಿ.
15- ನಾನು ಅವನನ್ನು ಒಬ್ಬ ಡಾಕ್ಟರ್, ಎಂಜಿನಿಯರ್, ಉನ್ನತ ಅಧಿಕಾರಿಗಿಂತ ಒಳ್ಳೆಯ ಮನುಷ್ಯನಾಗಿ ಬಾಳುವುದನ್ನು ಕಾಣ ಬಯಸುತ್ತೇನೆ. ಅವನಿಗೆ /ಅವಳಿಗೆ ಇಂಥ ಗುಣಗಳನ್ನು ರೂಢಿಸಿದರೆ ನಾನು ನಿಮಗೆ ಋಣಿ.
ಧನ್ಯವಾದಗಳು....
ಇಂತಿ ನಿಮ್ಮವ,
ಪ್ರಸಾದ ಕಾಂಬಳೆ
****************************************
ಒಬ್ಬ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಮುನ್ನ ಯಾವ ರೀತಿ ಶಿಕ್ಷಕರೊಂದಿಗೆ ತಮ್ಮ ಕಳಕಳಿಯ ಭಾವವನ್ನು ವ್ಯಕ್ತಪಡಿಸಿದ್ದಾರೆ ಎಂಬುದು ಈ ಪುಸ್ತಕದ ಮುಖ್ಯ ಉದ್ದೇಶ . ಬೆಳೆಯುವ ಸಿರಿ ಮೊಳಕೆಯಲ್ಲಿ ಕಾಣು ಎಂದು ಸ್ವಾಮಿ ವಿವೇಕಾನಂದರವರು ಹೇಳಿದ ಹಾಗೆ ಮಕ್ಕಳು ಚಿಕ್ಕವರಿದ್ದಾಗಲೇ ಅವರಿಗೆ ಜೀವನದ ಮೌಲ್ಯಗಳನ್ನು ಕಲಿಸಬೇಕು.ಅವಾಗ ಮಾತ್ರ ಅವರು ಜೀವನದಲ್ಲಿ ಏನನ್ನಾದರೂ ಸಾಧಿಸಬಲ್ಲರು. ಕಷ್ಟವಾಗಲಿ ಸುಖವಾಗಿರಲಿ ಸರಿಯಾದ ದಾರಿಯಲ್ಲಿ ನಡಿಯಬೇಕೆಂಬುವುದೇ ಪೋಷಕರ ಆಸೆ. ಮೌಢ್ಯವನ್ನು ಹೋಗಲಾಡಿಸಿ, ಸತ್ಯದ ಕಡೆಗೆ ಚಲಿಸಬೇಕು,ಗುರುಗಳು ಸಹ ವಿದ್ಯಾರ್ಥಿಗಳಿಗೆ ಪುಸ್ತಕದ ಜೊತೆಗೆ ಹೊಸ ಚಟುವಟಿಕೆ ಭೋದಿಸಬೇಕು.